ಬೆಲ್ಲ, ಸಕ್ಕರೆ ಬೆನ್ನಲ್ಲೇ ಗಗನಕ್ಕೇರಿದ ಮೊಟ್ಟೆ ಬೆಲೆ

Share this… Facebook Whatsapp Telegram Pinterest Twitter Linkedinಮೊಟ್ಟೆ ತಿನ್ನುವವರಿಗೆ ಇದೀಗ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಈಗಾಗಲೇ ಸಕ್ಕರೆ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ, ಮುಂದಿನ ದಿನಗಳಲ್ಲಿ ಮೊಟ್ಟೆಯ ದರವೂ ಹೆಚ್ಚಾಗಬಹುದು ಎಂಬ ಮಾತು ಕೇಳಿಬರುತ್ತಿದೆ. ಕಳೆದ ಒಂದು ವರ್ಷದಲ್ಲಿ ಭಾರತದಲ್ಲಿ ಮೊಟ್ಟೆಯ ಬೆಲೆ ಸುಮಾರು 35ರಿಂದ 40% ಏರಿಕೆಯಾಗಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿಯ (NECC) ಅಂಕಿಅಂಶಗಳನ್ನು ಉಲ್ಲೇಖಿಸಲಾಗಿದೆ. ಸದ್ಯ ಸಗಟು ಮಾರುಕಟ್ಟೆಯಲ್ಲಿ ಒಂದು…

Read More

ಸಕ್ಕರೆ-ಬೆಲ್ಲದ ದರ ಮತ್ತೆ ಏರಿಕೆ; ಗ್ರಾಹಕರ ಜೇಬಿಗೆ ಬಿತ್ತು ಮತ್ತೊಂದು ಹೊರೆ!

Share this… Facebook Whatsapp Telegram Pinterest Twitter Linkedinಬೆಂಗಳೂರು: ಈಗಾಗಲೇ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸಕ್ಕರೆ ಮತ್ತು ಬೆಲ್ಲದ ದರ ಮತ್ತೆ ಹೆಚ್ಚಳವಾಗಿದ್ದು, ಗ್ರಾಹಕರ ಜೇಬಿಗೆ ಹೆಚ್ಚುವರಿ ಹೊರೆ ಬಿದ್ದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆಜಿಗೆ ₹66 ಇದ್ದ ಸಕ್ಕರೆ, ಇದೀಗ ₹70ಕ್ಕೆ ಏರಿಕೆಯಾಗಿದೆ. ಅಂದರೆ ಕೆಜಿಗೆ ₹4 ಹೆಚ್ಚಳವಾಗಿದೆ. ಇನ್ನು ಬೆಲ್ಲದ ದರದಲ್ಲಂತೂ ಏರಿಕೆ ಇನ್ನಷ್ಟು ಜೋರಾಗಿದೆ. ನಾಲ್ಕು ದಿನಗಳ ಹಿಂದೆ ಕೆಜಿಗೆ ₹68…

Read More

ದರ್ಶನ್‌ಗೆ ಮತ್ತಷ್ಟು ಸಂಕಷ್ಟ; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿ (Approver) ಆಗಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದೆ. ಸಿಸಿಹೆಚ್‌ 42ರ ನ್ಯಾಯಾಲಯ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಅನುಮತಿ ನೀಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಎಲ್ಲಾ ಸತ್ಯಗಳನ್ನು ನ್ಯಾಯಾಲಯದ ಮುಂದೆ ಹೇಳಬೇಕು ಎಂದು ಸೂಚಿಸಲಾಗಿದೆ….

Read More

Karnataka High court: ಮನೆಗೆಲಸ ಮಾಡು, ಪೋಷಕರನ್ನು ನೋಡಿಕೋ ಎಂದು ಪತ್ನಿಗೆ ಗಂಡ ಆರ್ಡರ್ ಮಾಡುವಂತಿಲ್ಲ: ಹೈಕೋರ್ಟ್

Share this… Facebook Whatsapp Telegram Pinterest Twitter Linkedinಬೆಂಗಳೂರು: ಮದುವೆಯಾಗಿದೆ (Karnataka High court)  ಎಂಬ ಕಾರಣಕ್ಕೆ ಪತ್ನಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ನಿಯಂತ್ರಿಸಲು ಅಥವಾ ಆಕೆಯ ಮೇಲೆ ದರ್ಪ ತೋರಲು ಗಂಡನಿಗೆ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪತ್ನಿ ಮನೆಗೆಲಸ ಮಾಡಬೇಕು, ಪತಿಯ ಪೋಷಕರನ್ನು ನೋಡಿಕೊಳ್ಳಬೇಕು ಅಥವಾ ತವರು ಮನೆಗೆ ಹೋಗಲು ಗಂಡನ ಮನೆಯವರ ಅನುಮತಿ ಪಡೆಯಬೇಕು ಎಂಬ ಮನಸ್ಥಿತಿಯನ್ನು ಕೋರ್ಟ್ ಒಪ್ಪಲಾಗದು ಎಂದು ಸ್ಪಷ್ಟಪಡಿಸಿದೆ. ಪತ್ನಿ ಮತ್ತು ಮಗಳಿಗೆ ಮಾಸಿಕ…

Read More

ನಟ, ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

Share this… Facebook Whatsapp Telegram Pinterest Twitter Linkedinಬೆಂಗಳೂರು: ಖ್ಯಾತ ನಟ ಹಾಗೂ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ, ಕಿರುಕುಳ ಹಾಗೂ ಬೆದರಿಕೆ ಆರೋಪ ಕೇಳಿಬಂದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು ₹3 ಕೋಟಿ 85 ಲಕ್ಷ ಹಣ ಪಡೆದು, ಬಳಿಕ ವಾಪಸ್ ನೀಡದೇ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ…

Read More

ಕರ್ನಾಟಕದಲ್ಲಿ ಫೇಕ್‌ ಪನ್ನೀರ್‌ 1 ವರ್ಷ ಬ್ಯಾನ್; ಆಹಾರ ಸುರಕ್ಷತಾ ಇಲಾಖೆ ಆದೇಶ

Share this… Facebook Whatsapp Telegram Pinterest Twitter Linkedinಬೆಂಗಳೂರು: ಪನ್ನೀರ್ ಹೆಸರಿನಲ್ಲಿ ಮಾರಾಟವಾಗುತ್ತಿರುವ ಅನಲಾಗ್‌ ಅಥವಾ ಕೃತಕ ಪನ್ನೀರ್‌ ಬಳಕೆಗೆ ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ಇಲಾಖೆ ಈ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಪನ್ನೀರ್ ಹೆಸರಿನಲ್ಲಿ ಅನಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ, ಪೂರೈಕೆ ಹಾಗೂ ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಹಲವು ಪನ್ನೀರ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅವುಗಳಲ್ಲಿ…

Read More

ಪವಿತ್ರಾ ಜೈಲಿನಲ್ಲಿರುವಾಗ ಮಾಜಿ ಪತಿ ಸಂಜಯ್ ಸಿಂಗ್ ನಿಧನ; ತಡವಾಗಿ ಗೊತ್ತಾದ ಸಾವಿನ ಸುದ್ದಿ

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಅವರು ಮೃತಪಟ್ಟ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಸುಮಾರು 7-8 ತಿಂಗಳ ಹಿಂದೆಯೇ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜಸ್ಥಾನದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡ ಜೊತೆ ವಿಚ್ಛೇದನದ ಬಳಿಕ…

Read More

Renukaswamy Murder Case: ‘ಮಾಫಿ ಸಾಕ್ಷಿ ಸುಲಭವಲ್ಲ, ಸ್ವಲ್ಪ ಉಲ್ಟಾ ಹೊಡೆದ್ರೆ’! ದರ್ಶನ್‌ಗೆ ಕಾದಿದ್ಯಾ ಸಂಕಷ್ಟ?

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renukaswamy Murder Case) ಜೈಲು ಪಾಲಾಗಿರುವ ದರ್ಶನ್​​ಗೆ (Darshan) ಮಾಫಿ ಸಾಕ್ಷಿ ಕಂಟಕ ಶುರುವಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್​, ಪವಿತ್ರಾ ಹಾಗೂ ದರ್ಶನ್ ವಿರುದ್ಧ ಸಾಕ್ಷ್ಯ ಹೇಳಲು ಸಜ್ಜಾಗಿ ನಿಂತಿದ್ದಾನೆ. ಇದಕ್ಕಾಗಿ ಕೋರ್ಟ್‌ ಕೂಡ ಓಕೆ ಅಂತ ಹೇಳಿದ್ದು, ನಾಳೆ ಕೋರ್ಟ್‌ನಲ್ಲಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆಯಲಿದೆ. ಪ್ರದೋಷ್​ ಹೇಳಿಕೆ ಇಬ್ಬರಿಗೂ ಮತ್ತಷ್ಟು ಕಂಟಕವಾಗುವ ಸಾಧ್ಯತೆಗಳು ನಿಚ್ಚಳವಾಗಿವೆ. ಹೀಗಿರುವಾಗಲೇ ಹಿರಿಯ…

Read More

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮತ್ತೆ ಶಾಕ್‌; ಇಂದು ಮಾಫಿ ಸಾಕ್ಷಿ ಪ್ರದೋಷ್‌ ಖುದ್ದು ವಿಚಾರಣೆ

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಭದ್ರತಾ ಕಾರಣಗಳಿಂದ ವಿಡಿಯೊ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ದರ್ಶನ್ ಪರ ವಕೀಲರು ವಿಚಾರಣಾ ಪ್ರಕ್ರಿಯೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಆದರೆ, ದರ್ಶನ್‌ರನ್ನು ನ್ಯಾಯಾಲಯಕ್ಕೆ ಕರೆತಂದರೆ ಭದ್ರತಾ ಸಮಸ್ಯೆ…

Read More

ಗುಟ್ಕಾ, ಪಾನ್ ಮಸಾಲ ಬ್ಯಾನ್ ಆದೇಶ ವಾಪಸ್ ಪಡೆದಿಲ್ಲ ಎಂದ ಯು.ಟಿ.ಖಾದರ್

Share this… Facebook Whatsapp Telegram Pinterest Twitter Linkedinಬೆಂಗಳೂರು: ಗುಟ್ಕಾ ಹಾಗೂ ಪಾನ್ ಮಸಾಲದಲ್ಲಿ ನಿಕೋಟಿನ್ ಬಳಕೆಗೆ ಸಂಬಂಧಿಸಿದ ನಿಷೇಧ ಆದೇಶವನ್ನು ಸರ್ಕಾರ ವಾಪಸ್ ಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಾನ್ ಮಸಾಲದಲ್ಲಿ ನಿಕೋಟಿನ್ ಇರಬಾರದು ಎಂಬ ಆದೇಶವನ್ನು ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾಡಲಾಗಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದರು. ಅಡಿಕೆ ಬೆಳೆಗಾರರು, ರೈತರು ಮತ್ತು ವ್ಯಾಪಾರಿಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಅಡಿಕೆ…

Read More